September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ನಗರದಿಂದ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ – ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ರಸ್ತೆಯನ್ನು ಅಗಲೀಕರಣಗೊಳಿಸಿ, ಒಳಚರಂಡಿಗಳನ್ನು ನಿರ್ಮಿಸಿ ಅಭಿವೃದ್ಧಿಗೊಳಿಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ಅಗತ್ಯವಿರುವ ಅಂದಾಜು ರೂ. 2.೦೦ ಕೋಟಿ ಅನುದಾನವನ್ನು ಒದಗಿಸಿಕೊಡುವಂತೆ ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿ ವತಿಯಿಂದ ಮನವಿ ಸಲ್ಲಿಸಲಾಯಿತು.


ಬೆಳ್ತಂಗಡಿ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ- ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಸಾರ್ವಜನಿಕರ/ವಿದ್ಯಾರ್ಥಿಗಳ ಹಾಗೂ ಉದ್ಯಮಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ರಸ್ತೆಯು ಹಾದು ಹೋಗುವ ಪ್ರದೇಶದಲ್ಲಿ ಸರಕಾರದ ಮೂರು ವಿದ್ಯಾರ್ಥಿ ನಿಲಯಗಳು, ಒಂದು ವಸತಿ ಶಾಲೆ, ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಹಾಲಿನ ಡೈರಿ, ೧೦೦೦ಕ್ಕೂ ಅಧಿಕ ಕುಟುಂಬಗಳು ವಾಸಿಸುವ ಜನ ಪ್ರದೇಶವಾಗಿರುತ್ತದೆ. ಅದಲ್ಲದೇ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ನೂತನ ಉತ್ಪಾದನಾ ಘಟಕವು ಸಂಪರ್ಕ ರಸ್ತೆಯ ಬದಿಯಲ್ಲೇ ನೂತನವಾಗಿ ಪ್ರಾರಂಭಗೊAಡಿದ್ದು ಈ ಪ್ರದೇಶದ ನಗರೀಕರಣಕ್ಕೆ ಹೊಸ ಮೆರುಗನ್ನು ನೀಡಿದೆ. ಪ್ರಸ್ತುತ ಈ ಸಂಪರ್ಕ ರಸ್ತೆಯನ್ನು ಬೆಳ್ತಂಗಡಿ – ಉಪ್ಪಿನಂಗಡಿ ಮುಖಾಂತರ ಪುತ್ತೂರನ್ನು ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯನ್ನಾಗಿ ಉಪಯೋಗಿಸುತ್ತಿದ್ದು, ಸದರಿ ರಸ್ತೆಯನ್ನು ಅಭಿವೃದ್ಧಿ ಪಡಿಸುವುದು ಸೂಕ್ತವೆಂದು ಬೆಳ್ತಂಗಡಿ ನಗರ ಪಂಚಾಯತ್ ಆಡಳಿತ ಮಂಡಳಿಯು ತೀರ್ಮಾನಿಸಿದೆ.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪ.ಪಂ. ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ ಅರಿಗ, ಸದಸ್ಯರಾದ ಲೋಕೇಶ್, ಅಂಬರೀಶ್, ಪ್ರಮುಖರಾದ ರಾಜೇಶ್ ನಾಯಕ್, ಕರುಣಾಕರ, ಭುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್ ರವರು ಭೇಟಿ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!