July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಕರಾಯ: ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಕರಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ.)ಗುರುವಾಯನಕೆರೆ ತಾಲೂಕು , ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ 7 ದಿನಗಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಭಜನೆ ಮಾಡುವುದರಿಂದ ಯುವ ಪೀಳಿಗೆ ಸಮಾಜದ ಮುಖ್ಯ ವಾಹಿನಿಗೆ ಬರುವುದರ ಜೊತೆಗೆ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುವಂತಾಗಲಿ ಎಂದು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಜಗದೀಶ್ ಶೆಟ್ಟಿ ಮೈರ ತಿಳಿಸಿದರು.


ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ ಜಿಲ್ಲೆಯ ನಿರ್ದೇಶಕ ದಿನೇಶ್ .ಡಿ ರವರು ನಮ್ಮ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸುತ್ತೇವೆ ಅದರ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಿದಾಗ ಮಕ್ಕಳ ಜೀವನವು ಉತ್ತಮವಾಗಿರುತ್ತದೆ. ಹಾಗೂ ಪಂಚೇಂದ್ರಿಯಗಳ ಏಕಾಗ್ರತೆಗೆ ಮುಖ್ಯ ಕಡಿವಾಣ ಭಜನೆ ಆದುದರಿಂದ ಎಲ್ಲರೂ ಭಜನೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ ಭಟ್ ರವರು ಭಜನೆ ಮಾಡಿದ್ದಲ್ಲಿ ವಿಭಜನೆ ಇಲ್ಲ ಆದುದರಿಂದ ಪ್ರತಿಯೊಂದು ಮನೆಯಲ್ಲಿ ಭಜನೆ ನಿರಂತರವಾಗಿ ನಡೆಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ , ತಣ್ಣೀರುಪಂತ ವಲಯದ ಭಜನಾ ಪರಿಷತ್ ನ ಉಪಾಧ್ಯಕ್ಷ ಸೇಷಪ್ಪ, ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಅನಂತಕೃಷ್ಣ ಕುದ್ದನಾಯ, ಕರಾಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಪ್ರಿಯ ಕುಶಾಲಪ್ಪಗೌಡ ,ಕೃಷ್ಣ ಭಜನಾ ಮಂದಿರದ ಹಿರಿಯ ಸದಸ್ಯರಾದ ಮಾಧವ ಶೆಟ್ಟಿ ಮೈರಾ, ಕರಾಯ ಭಜನಾ ಮಂಡಳಿಯ ಮಹಿಳಾ ಸದಸ್ಯರಾದ ಪ್ರಮೀಳಾ ಸುದರ್ಶನ ಕೊಲ್ಲಿ , ತಣ್ಣೀರುಪಂಥ ವಲಯದ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಸೇವಾ ಪ್ರತಿನಿಧಿಯಾದ ಸುಜಾತ ಹಿರಿಯರಾದ ಗೋಪಾಲಕೃಷ್ಣ ಪೈ ಉಪಸ್ಥಿತರಿದ್ದರು.


ನಿವೃತ್ತ ಶಿಕ್ಷಕರಾದ ಯುವರಾಜ್ ಅನಾರ್ ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ್ ಗೌಡ ಸ್ವಾಗತಿಸಿ, ವಲಯದ ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ ಧನ್ಯವಾದವಿತ್ತರು.

Related posts

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!