27.3 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya
error: Content is protected !!