23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!