July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!