September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!