23 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಬೆಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಮತ್ತು ಗುರುವಾಯನಕೆರೆ., ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಘಟಕ ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ತರಬೇತಿ ನಡೆಸಲಾಯಿತು.

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕಿನ ಆಯ್ದ ರೈತರಿಗೆ ಬಿದಿರು ನಾಟಿಯ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಕೃಷಿ ವಿಭಾಗ ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮೀನೇಜಸ್ ಉದ್ಘಾಟಿಸಿ ಕಾರ್ಯಕ್ರಮದ ಪ್ರಯೋಜನ, ಬೆಂಬೋ ಸೊಸೈಟಿಯಿಂದ ಸಿಗುತ್ತಿರುವ ಸಹಕಾರ ಹಾಗೂ ಬಿದಿರು ಕೃಷಿ ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಬೊ ಸೊಸೈಟಿ ಅಪ್ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ಕೆ.ಏನ್.ಮೂರ್ತಿ ಇವರು ಬಿದಿರು ನಾಟಿ, ಬೇಕಾದ ದಾಖಲಾತಿ, ಪ್ರೋತ್ಸಾಹ ಧನ, ಮುಂದಿನ ದಿನದಲ್ಲಿ ಬಿದಿರಿಗೆ ಅತಿ ಬೇಡಿಕೆ ಇದ್ದು ಬಿದಿರು ಕೃಷಿಯ ಪೂರ್ಣ ಮಾಹಿತಿ ಹಾಗೂ ಇತ್ಯಾದಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ಬೆಳ್ತಂಗಡಿ ರಬ್ಬರ್ ಸೊಸೈಟಿ ರಾಜು ಶೆಟ್ಟಿ ಬಿದಿರು ಕೃಷಿ ಅನುಷ್ಠಾನಿಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯಧಿಕಾರಿ ತ್ಯಾಗರಾಜ್ ಅರಣ್ಯ ಇಲಾಖೆಯಿಂದಲೂ ಬಿದಿರು ಕೃಷಿಗೆ ಉತ್ತಮ ಪ್ರೋತ್ಸಾಹ ಇದ್ದು ಸದಸ್ಯರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋದರ, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್, ಕೇಂದ್ರ ಕಚೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಾಗೂ ಮಾರುತಿ , ಬಿದಿರು ಕೃಷಿ ಅನುಷ್ಠಾನದ ಮೇಲ್ವಿಚಾರಕರಾದ ಕುಮಾರ್, ಈಗಾಗಲೇ ಬಿದಿರು ಕೃಷಿ ಮಾಡಿರುವ ಪರಿಣಿತ ರೈತರು, ತಾಲೂಕಿನ ಆಯ್ದ ರೈತರು ಉಪಸ್ಥಿತಿ ಇದ್ದು ಮಾಹಿತಿಯನ್ನು ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.


ಉಚಿತವಾಗಿ ಬಿದಿರು ಗಿಡ ಬೇಕಾದವರು 9482340154 / 8660891480 ಸಂಪರ್ಕಿಸಬಹುದಾಗಿದೆ.

.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!