September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಬೆಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಮತ್ತು ಗುರುವಾಯನಕೆರೆ., ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಘಟಕ ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ತರಬೇತಿ ನಡೆಸಲಾಯಿತು.

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕಿನ ಆಯ್ದ ರೈತರಿಗೆ ಬಿದಿರು ನಾಟಿಯ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಕೃಷಿ ವಿಭಾಗ ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮೀನೇಜಸ್ ಉದ್ಘಾಟಿಸಿ ಕಾರ್ಯಕ್ರಮದ ಪ್ರಯೋಜನ, ಬೆಂಬೋ ಸೊಸೈಟಿಯಿಂದ ಸಿಗುತ್ತಿರುವ ಸಹಕಾರ ಹಾಗೂ ಬಿದಿರು ಕೃಷಿ ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಬೊ ಸೊಸೈಟಿ ಅಪ್ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ಕೆ.ಏನ್.ಮೂರ್ತಿ ಇವರು ಬಿದಿರು ನಾಟಿ, ಬೇಕಾದ ದಾಖಲಾತಿ, ಪ್ರೋತ್ಸಾಹ ಧನ, ಮುಂದಿನ ದಿನದಲ್ಲಿ ಬಿದಿರಿಗೆ ಅತಿ ಬೇಡಿಕೆ ಇದ್ದು ಬಿದಿರು ಕೃಷಿಯ ಪೂರ್ಣ ಮಾಹಿತಿ ಹಾಗೂ ಇತ್ಯಾದಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ಬೆಳ್ತಂಗಡಿ ರಬ್ಬರ್ ಸೊಸೈಟಿ ರಾಜು ಶೆಟ್ಟಿ ಬಿದಿರು ಕೃಷಿ ಅನುಷ್ಠಾನಿಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯಧಿಕಾರಿ ತ್ಯಾಗರಾಜ್ ಅರಣ್ಯ ಇಲಾಖೆಯಿಂದಲೂ ಬಿದಿರು ಕೃಷಿಗೆ ಉತ್ತಮ ಪ್ರೋತ್ಸಾಹ ಇದ್ದು ಸದಸ್ಯರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋದರ, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್, ಕೇಂದ್ರ ಕಚೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಾಗೂ ಮಾರುತಿ , ಬಿದಿರು ಕೃಷಿ ಅನುಷ್ಠಾನದ ಮೇಲ್ವಿಚಾರಕರಾದ ಕುಮಾರ್, ಈಗಾಗಲೇ ಬಿದಿರು ಕೃಷಿ ಮಾಡಿರುವ ಪರಿಣಿತ ರೈತರು, ತಾಲೂಕಿನ ಆಯ್ದ ರೈತರು ಉಪಸ್ಥಿತಿ ಇದ್ದು ಮಾಹಿತಿಯನ್ನು ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.


ಉಚಿತವಾಗಿ ಬಿದಿರು ಗಿಡ ಬೇಕಾದವರು 9482340154 / 8660891480 ಸಂಪರ್ಕಿಸಬಹುದಾಗಿದೆ.

.

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya
error: Content is protected !!