23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಲಿದೆ.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು. ವಾಣಿಜ್ಯ ಮಳಿಗೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉಪಸ್ಥಿತರಿರುವರು.


ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya
error: Content is protected !!