July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!