ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya
error: Content is protected !!