23.2 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಕರಾಯ: ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಕರಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ.)ಗುರುವಾಯನಕೆರೆ ತಾಲೂಕು , ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ 7 ದಿನಗಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಭಜನೆ ಮಾಡುವುದರಿಂದ ಯುವ ಪೀಳಿಗೆ ಸಮಾಜದ ಮುಖ್ಯ ವಾಹಿನಿಗೆ ಬರುವುದರ ಜೊತೆಗೆ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುವಂತಾಗಲಿ ಎಂದು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಜಗದೀಶ್ ಶೆಟ್ಟಿ ಮೈರ ತಿಳಿಸಿದರು.


ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ ಜಿಲ್ಲೆಯ ನಿರ್ದೇಶಕ ದಿನೇಶ್ .ಡಿ ರವರು ನಮ್ಮ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸುತ್ತೇವೆ ಅದರ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಿದಾಗ ಮಕ್ಕಳ ಜೀವನವು ಉತ್ತಮವಾಗಿರುತ್ತದೆ. ಹಾಗೂ ಪಂಚೇಂದ್ರಿಯಗಳ ಏಕಾಗ್ರತೆಗೆ ಮುಖ್ಯ ಕಡಿವಾಣ ಭಜನೆ ಆದುದರಿಂದ ಎಲ್ಲರೂ ಭಜನೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ ಭಟ್ ರವರು ಭಜನೆ ಮಾಡಿದ್ದಲ್ಲಿ ವಿಭಜನೆ ಇಲ್ಲ ಆದುದರಿಂದ ಪ್ರತಿಯೊಂದು ಮನೆಯಲ್ಲಿ ಭಜನೆ ನಿರಂತರವಾಗಿ ನಡೆಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗುರುವಾಯನಕೆರೆ ತಾಲೂಕಿನ ಯೋಜನಾಧಿಕಾರಿ ಅಶೋಕ್ , ತಣ್ಣೀರುಪಂತ ವಲಯದ ಭಜನಾ ಪರಿಷತ್ ನ ಉಪಾಧ್ಯಕ್ಷ ಸೇಷಪ್ಪ, ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಅನಂತಕೃಷ್ಣ ಕುದ್ದನಾಯ, ಕರಾಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಪ್ರಿಯ ಕುಶಾಲಪ್ಪಗೌಡ ,ಕೃಷ್ಣ ಭಜನಾ ಮಂದಿರದ ಹಿರಿಯ ಸದಸ್ಯರಾದ ಮಾಧವ ಶೆಟ್ಟಿ ಮೈರಾ, ಕರಾಯ ಭಜನಾ ಮಂಡಳಿಯ ಮಹಿಳಾ ಸದಸ್ಯರಾದ ಪ್ರಮೀಳಾ ಸುದರ್ಶನ ಕೊಲ್ಲಿ , ತಣ್ಣೀರುಪಂಥ ವಲಯದ ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರ್ ರೈ, ಸೇವಾ ಪ್ರತಿನಿಧಿಯಾದ ಸುಜಾತ ಹಿರಿಯರಾದ ಗೋಪಾಲಕೃಷ್ಣ ಪೈ ಉಪಸ್ಥಿತರಿದ್ದರು.


ನಿವೃತ್ತ ಶಿಕ್ಷಕರಾದ ಯುವರಾಜ್ ಅನಾರ್ ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ್ ಗೌಡ ಸ್ವಾಗತಿಸಿ, ವಲಯದ ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ ಧನ್ಯವಾದವಿತ್ತರು.

Related posts

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!