23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya
error: Content is protected !!