September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!