22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya
error: Content is protected !!