23.2 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಬೆಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಮತ್ತು ಗುರುವಾಯನಕೆರೆ., ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಘಟಕ ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ತರಬೇತಿ ನಡೆಸಲಾಯಿತು.

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕಿನ ಆಯ್ದ ರೈತರಿಗೆ ಬಿದಿರು ನಾಟಿಯ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಕೃಷಿ ವಿಭಾಗ ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮೀನೇಜಸ್ ಉದ್ಘಾಟಿಸಿ ಕಾರ್ಯಕ್ರಮದ ಪ್ರಯೋಜನ, ಬೆಂಬೋ ಸೊಸೈಟಿಯಿಂದ ಸಿಗುತ್ತಿರುವ ಸಹಕಾರ ಹಾಗೂ ಬಿದಿರು ಕೃಷಿ ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಬೊ ಸೊಸೈಟಿ ಅಪ್ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ಕೆ.ಏನ್.ಮೂರ್ತಿ ಇವರು ಬಿದಿರು ನಾಟಿ, ಬೇಕಾದ ದಾಖಲಾತಿ, ಪ್ರೋತ್ಸಾಹ ಧನ, ಮುಂದಿನ ದಿನದಲ್ಲಿ ಬಿದಿರಿಗೆ ಅತಿ ಬೇಡಿಕೆ ಇದ್ದು ಬಿದಿರು ಕೃಷಿಯ ಪೂರ್ಣ ಮಾಹಿತಿ ಹಾಗೂ ಇತ್ಯಾದಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ಬೆಳ್ತಂಗಡಿ ರಬ್ಬರ್ ಸೊಸೈಟಿ ರಾಜು ಶೆಟ್ಟಿ ಬಿದಿರು ಕೃಷಿ ಅನುಷ್ಠಾನಿಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯಧಿಕಾರಿ ತ್ಯಾಗರಾಜ್ ಅರಣ್ಯ ಇಲಾಖೆಯಿಂದಲೂ ಬಿದಿರು ಕೃಷಿಗೆ ಉತ್ತಮ ಪ್ರೋತ್ಸಾಹ ಇದ್ದು ಸದಸ್ಯರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋದರ, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್, ಕೇಂದ್ರ ಕಚೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಾಗೂ ಮಾರುತಿ , ಬಿದಿರು ಕೃಷಿ ಅನುಷ್ಠಾನದ ಮೇಲ್ವಿಚಾರಕರಾದ ಕುಮಾರ್, ಈಗಾಗಲೇ ಬಿದಿರು ಕೃಷಿ ಮಾಡಿರುವ ಪರಿಣಿತ ರೈತರು, ತಾಲೂಕಿನ ಆಯ್ದ ರೈತರು ಉಪಸ್ಥಿತಿ ಇದ್ದು ಮಾಹಿತಿಯನ್ನು ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.


ಉಚಿತವಾಗಿ ಬಿದಿರು ಗಿಡ ಬೇಕಾದವರು 9482340154 / 8660891480 ಸಂಪರ್ಕಿಸಬಹುದಾಗಿದೆ.

.

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!