23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya
error: Content is protected !!