ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.
ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.
ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.