23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಲಿದೆ.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು. ವಾಣಿಜ್ಯ ಮಳಿಗೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉಪಸ್ಥಿತರಿರುವರು.


ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!