23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya
error: Content is protected !!