25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya
error: Content is protected !!