23.7 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!