ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!