July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸೇವಾ ಕಾರ್ಯಕ್ಕೆ ನೂತನ ಟ್ರಸ್ಟಿಯಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಉದ್ಯಮಿ ಕೆ. ಮೋಹನ್ ಕುಮಾರ್ ನೇಮಕಗೊಂಡಿದ್ದಾರೆ.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಕೆ. ಮೋಹನ್ ಕುಮಾರ್ ಅವರು ಗುರುತಿಸಿಕೊಂಡಿದ್ದಾರೆ.


ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತ ಚಿಂತನೆ ಮಾಡಿ ಹಲವಾರು ಶಾಲೆಗಳಿಗೆ ಕಾಯಕಲ್ಪ ನೀಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮೂಲಕ ಯುವ ಸಮಾಜಕ್ಕೆ ಶಕ್ತಿಯಾಗಿ ಮತ್ತೊಬ್ಬರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿರುವುದು ಇವರ ಸಮಾಜಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಹೀಗೆ ಹತ್ತು ಹಲವಾರು ಸಮಾಜಕ್ಕೆ ಪ್ರೇರಣದಾಯಿ ಕೆಲಸ ಮಾಡುತ್ತಿರುವ ಮೋಹನ್ ಕುಮಾರ್ ಪ್ರತಿಷ್ಠಿತ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.


ಜೂನ್ 1 ರಂದು ನಡೆಯುವ ಪಟ್ಲ ಪೌಂಢೇಶನ್‌ನ ೧೦ನೇ ವರ್ಷದ ದಶಮಾನೋತ್ಸವ ಸಂಭ್ರಮಕ್ಕೆ ಕೆ. ಮೋಹನ್ ಕುಮಾರ್ ಅವರನ್ನು ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ, ಸದಸ್ಯ ವೆಂಕಟರಮಣ ಶೆಟ್ಟಿ ಉಜಿರೆ ಆಮಂತ್ರಣ ನೀಡಿ ಆಹ್ವಾನಿಸಿದರು.

Related posts

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya
error: Content is protected !!