July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನ‌ರ್ ಅಗರ್‌’ವಾಲ್‌ ವರ್ಗಾವಣೆಗೊಂಡಿದ್ದಾರೆ.

2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀ‌ರ್ ಕುಮಾ‌ರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನ‌ರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ.

ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದ‌ರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಈ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Related posts

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya
error: Content is protected !!