23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಬೆಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಮತ್ತು ಗುರುವಾಯನಕೆರೆ., ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಘಟಕ ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ತರಬೇತಿ ನಡೆಸಲಾಯಿತು.

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕಿನ ಆಯ್ದ ರೈತರಿಗೆ ಬಿದಿರು ನಾಟಿಯ ತಾಂತ್ರಿಕ ತರಬೇತಿ ಕಾರ್ಯಾಗಾರವನ್ನು ಕೃಷಿ ವಿಭಾಗ ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮೀನೇಜಸ್ ಉದ್ಘಾಟಿಸಿ ಕಾರ್ಯಕ್ರಮದ ಪ್ರಯೋಜನ, ಬೆಂಬೋ ಸೊಸೈಟಿಯಿಂದ ಸಿಗುತ್ತಿರುವ ಸಹಕಾರ ಹಾಗೂ ಬಿದಿರು ಕೃಷಿ ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಬೊ ಸೊಸೈಟಿ ಅಪ್ ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕ ಕೆ.ಏನ್.ಮೂರ್ತಿ ಇವರು ಬಿದಿರು ನಾಟಿ, ಬೇಕಾದ ದಾಖಲಾತಿ, ಪ್ರೋತ್ಸಾಹ ಧನ, ಮುಂದಿನ ದಿನದಲ್ಲಿ ಬಿದಿರಿಗೆ ಅತಿ ಬೇಡಿಕೆ ಇದ್ದು ಬಿದಿರು ಕೃಷಿಯ ಪೂರ್ಣ ಮಾಹಿತಿ ಹಾಗೂ ಇತ್ಯಾದಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.


ಬೆಳ್ತಂಗಡಿ ರಬ್ಬರ್ ಸೊಸೈಟಿ ರಾಜು ಶೆಟ್ಟಿ ಬಿದಿರು ಕೃಷಿ ಅನುಷ್ಠಾನಿಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯಧಿಕಾರಿ ತ್ಯಾಗರಾಜ್ ಅರಣ್ಯ ಇಲಾಖೆಯಿಂದಲೂ ಬಿದಿರು ಕೃಷಿಗೆ ಉತ್ತಮ ಪ್ರೋತ್ಸಾಹ ಇದ್ದು ಸದಸ್ಯರು ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋದರ, ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್, ಕೇಂದ್ರ ಕಚೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಾಗೂ ಮಾರುತಿ , ಬಿದಿರು ಕೃಷಿ ಅನುಷ್ಠಾನದ ಮೇಲ್ವಿಚಾರಕರಾದ ಕುಮಾರ್, ಈಗಾಗಲೇ ಬಿದಿರು ಕೃಷಿ ಮಾಡಿರುವ ಪರಿಣಿತ ರೈತರು, ತಾಲೂಕಿನ ಆಯ್ದ ರೈತರು ಉಪಸ್ಥಿತಿ ಇದ್ದು ಮಾಹಿತಿಯನ್ನು ಸಂವಾದದ ಮೂಲಕ ಮಾಹಿತಿ ಪಡೆದುಕೊಂಡರು.


ಉಚಿತವಾಗಿ ಬಿದಿರು ಗಿಡ ಬೇಕಾದವರು 9482340154 / 8660891480 ಸಂಪರ್ಕಿಸಬಹುದಾಗಿದೆ.

.

Related posts

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
error: Content is protected !!