23.7 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಲಿದೆ.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು. ವಾಣಿಜ್ಯ ಮಳಿಗೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉಪಸ್ಥಿತರಿರುವರು.


ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!