July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಲಿದೆ.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು. ವಾಣಿಜ್ಯ ಮಳಿಗೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉಪಸ್ಥಿತರಿರುವರು.


ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!