28.3 C
ಪುತ್ತೂರು, ಬೆಳ್ತಂಗಡಿ
June 3, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ.

ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19 MB 0596 ನೇ ಕಾರನ್ನು ಅದರ ಚಾಲಕ ಹರೀಶ್ ಪೂಜಾರಿ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ತಿರುವು ರಸ್ತೆಯಲ್ಲಿ ಬಳಿ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು, ನಾರಾವಿ ಕಡೆಯಿಂದ ಅಚ್ಚುತ್ತ ಹೆಗ್ಡೆ ರವರು ತನ್ನ ಅಣ್ಣ ಸುರೇಶ ಹೆಗ್ಡೆ‌ ಜೊತೆ ತನ್ನ ಬೈಕ್ ನಂಬ್ರ KA 70 J 4022 ನೇಯದರಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದರೆನ್ನಲಾಗಿದೆ.

ಪರಿಣಾಮ ವಾಹನಗಳು ಜಖಂಗೊಂಡು ಬೈಕ್ ಸವಾರರು ಬೈಕನೊಂದಿಗೆ ರಸ್ತೆಗೆ ಬಿದ್ದು ಅಚ್ಚುತ್ತ ರವರ ಬಲಕಾಲಿಗೆ ಮುರಿತದ ಗಾಯ,ಬಲಕೈಗೆ,ಹಣೆಗೆ ತರಚಿದ ಗಾಯ ಹಾಗೂ ಸಹಸವಾರ ಸುರೇಶ್ ರವರ ತಲೆಗೆ ರಕ್ತಗಾಯಗಳಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಆ ಪೈಕಿ ತೀವ್ರಗಾಯಗೊಂಡ ಸುರೇಶ್ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya
error: Content is protected !!