September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ.

ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19 MB 0596 ನೇ ಕಾರನ್ನು ಅದರ ಚಾಲಕ ಹರೀಶ್ ಪೂಜಾರಿ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ತಿರುವು ರಸ್ತೆಯಲ್ಲಿ ಬಳಿ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು, ನಾರಾವಿ ಕಡೆಯಿಂದ ಅಚ್ಚುತ್ತ ಹೆಗ್ಡೆ ರವರು ತನ್ನ ಅಣ್ಣ ಸುರೇಶ ಹೆಗ್ಡೆ‌ ಜೊತೆ ತನ್ನ ಬೈಕ್ ನಂಬ್ರ KA 70 J 4022 ನೇಯದರಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದರೆನ್ನಲಾಗಿದೆ.

ಪರಿಣಾಮ ವಾಹನಗಳು ಜಖಂಗೊಂಡು ಬೈಕ್ ಸವಾರರು ಬೈಕನೊಂದಿಗೆ ರಸ್ತೆಗೆ ಬಿದ್ದು ಅಚ್ಚುತ್ತ ರವರ ಬಲಕಾಲಿಗೆ ಮುರಿತದ ಗಾಯ,ಬಲಕೈಗೆ,ಹಣೆಗೆ ತರಚಿದ ಗಾಯ ಹಾಗೂ ಸಹಸವಾರ ಸುರೇಶ್ ರವರ ತಲೆಗೆ ರಕ್ತಗಾಯಗಳಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಆ ಪೈಕಿ ತೀವ್ರಗಾಯಗೊಂಡ ಸುರೇಶ್ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya
error: Content is protected !!