23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಿತು.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭಾ ಹಾರೈಸಿದರು. ವಾಣಿಜ್ಯ ಮಳಿಗೆಯ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ , ಕುದ್ಕೋಳಿ ವಾಸು ಪೂಜಾರಿ ಉಪಸ್ಥಿತರಿದ್ದರು.

ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!