July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya
error: Content is protected !!