September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya
error: Content is protected !!