25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ.

ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19 MB 0596 ನೇ ಕಾರನ್ನು ಅದರ ಚಾಲಕ ಹರೀಶ್ ಪೂಜಾರಿ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ತಿರುವು ರಸ್ತೆಯಲ್ಲಿ ಬಳಿ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು, ನಾರಾವಿ ಕಡೆಯಿಂದ ಅಚ್ಚುತ್ತ ಹೆಗ್ಡೆ ರವರು ತನ್ನ ಅಣ್ಣ ಸುರೇಶ ಹೆಗ್ಡೆ‌ ಜೊತೆ ತನ್ನ ಬೈಕ್ ನಂಬ್ರ KA 70 J 4022 ನೇಯದರಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದರೆನ್ನಲಾಗಿದೆ.

ಪರಿಣಾಮ ವಾಹನಗಳು ಜಖಂಗೊಂಡು ಬೈಕ್ ಸವಾರರು ಬೈಕನೊಂದಿಗೆ ರಸ್ತೆಗೆ ಬಿದ್ದು ಅಚ್ಚುತ್ತ ರವರ ಬಲಕಾಲಿಗೆ ಮುರಿತದ ಗಾಯ,ಬಲಕೈಗೆ,ಹಣೆಗೆ ತರಚಿದ ಗಾಯ ಹಾಗೂ ಸಹಸವಾರ ಸುರೇಶ್ ರವರ ತಲೆಗೆ ರಕ್ತಗಾಯಗಳಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಆ ಪೈಕಿ ತೀವ್ರಗಾಯಗೊಂಡ ಸುರೇಶ್ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
error: Content is protected !!