22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಿತು.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭಾ ಹಾರೈಸಿದರು. ವಾಣಿಜ್ಯ ಮಳಿಗೆಯ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ , ಕುದ್ಕೋಳಿ ವಾಸು ಪೂಜಾರಿ ಉಪಸ್ಥಿತರಿದ್ದರು.

ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!