September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್ (ಕುದ್ಕೋಳಿ ವಾಸು ಪೂಜಾರಿ ಕಾಂಪ್ಲೆಕ್ಸ್) ಇದರ ಶುಭಾರಂಭವು ಮೇ 30ರಂದು ಜರಗಿತು.

ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭಾ ಹಾರೈಸಿದರು. ವಾಣಿಜ್ಯ ಮಳಿಗೆಯ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ , ಕುದ್ಕೋಳಿ ವಾಸು ಪೂಜಾರಿ ಉಪಸ್ಥಿತರಿದ್ದರು.

ಕೆ.ವಿ.ಪಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಿಸಲಿರುವ ಗುರುದೇವ ಎಲೆಕ್ಟ್ರಿಕಲ್ ನಲ್ಲಿ ಸ್ಯಾನಿಟರಿಗಳು, ಸಿಪಿ ಫಿಟ್ಟಿಂಗ್, ಗ್ಲೆ ಫಿಟ್ಟಿಂಗ್, ಆಶೀರ್ವಾದ್ ಸಿಪಿವಿಸಿ, ಯುಪಿವಿಸಿ, ಪಿವಿಸಿ ಪೈಪ್‌ಗಳು, ಆಶೀರ್ವಾದ್ ಕಾಲಮ್ ಪೈಪ್‌ಗಳು, ಎಚ್‌ಡಿಪಿಇ ಪೈಪ್‌ಗಳು, ಟ್ಯಾಂಕ್‌ಗಳು ಮತ್ತು ಎಲ್ಲಾ ರೀತಿಯ ವಿದ್ಯುತ್ ಸರಕುಗಳು ಲಭ್ಯವಿರುತ್ತದೆ ಎಂದು ಸಂಸ್ಥೆಯ ಮಾಲಕರಾದ ಶ್ರೀಮತಿ ತಾರಾ ಮತ್ತು ವಾಸು ಪೂಜಾರಿ ಕುದ್ಕೋಳಿ ಹಾಗೂ ನಿತೇಶ್ ಅವರು ತಿಳಿಸಿದ್ದಾರೆ.

Related posts

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!