23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya
error: Content is protected !!