September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ.

ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19 MB 0596 ನೇ ಕಾರನ್ನು ಅದರ ಚಾಲಕ ಹರೀಶ್ ಪೂಜಾರಿ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ತಿರುವು ರಸ್ತೆಯಲ್ಲಿ ಬಳಿ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು, ನಾರಾವಿ ಕಡೆಯಿಂದ ಅಚ್ಚುತ್ತ ಹೆಗ್ಡೆ ರವರು ತನ್ನ ಅಣ್ಣ ಸುರೇಶ ಹೆಗ್ಡೆ‌ ಜೊತೆ ತನ್ನ ಬೈಕ್ ನಂಬ್ರ KA 70 J 4022 ನೇಯದರಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದರೆನ್ನಲಾಗಿದೆ.

ಪರಿಣಾಮ ವಾಹನಗಳು ಜಖಂಗೊಂಡು ಬೈಕ್ ಸವಾರರು ಬೈಕನೊಂದಿಗೆ ರಸ್ತೆಗೆ ಬಿದ್ದು ಅಚ್ಚುತ್ತ ರವರ ಬಲಕಾಲಿಗೆ ಮುರಿತದ ಗಾಯ,ಬಲಕೈಗೆ,ಹಣೆಗೆ ತರಚಿದ ಗಾಯ ಹಾಗೂ ಸಹಸವಾರ ಸುರೇಶ್ ರವರ ತಲೆಗೆ ರಕ್ತಗಾಯಗಳಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಆ ಪೈಕಿ ತೀವ್ರಗಾಯಗೊಂಡ ಸುರೇಶ್ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!