22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿವರದಿ

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ.

ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19 MB 0596 ನೇ ಕಾರನ್ನು ಅದರ ಚಾಲಕ ಹರೀಶ್ ಪೂಜಾರಿ ಎಂಬವರು ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ತಿರುವು ರಸ್ತೆಯಲ್ಲಿ ಬಳಿ ನಿರ್ಲಕ್ಷ್ಯತನದಿಂದ ಚಲಾಯಿಸಿ ಬಂದು, ನಾರಾವಿ ಕಡೆಯಿಂದ ಅಚ್ಚುತ್ತ ಹೆಗ್ಡೆ ರವರು ತನ್ನ ಅಣ್ಣ ಸುರೇಶ ಹೆಗ್ಡೆ‌ ಜೊತೆ ತನ್ನ ಬೈಕ್ ನಂಬ್ರ KA 70 J 4022 ನೇಯದರಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದರೆನ್ನಲಾಗಿದೆ.

ಪರಿಣಾಮ ವಾಹನಗಳು ಜಖಂಗೊಂಡು ಬೈಕ್ ಸವಾರರು ಬೈಕನೊಂದಿಗೆ ರಸ್ತೆಗೆ ಬಿದ್ದು ಅಚ್ಚುತ್ತ ರವರ ಬಲಕಾಲಿಗೆ ಮುರಿತದ ಗಾಯ,ಬಲಕೈಗೆ,ಹಣೆಗೆ ತರಚಿದ ಗಾಯ ಹಾಗೂ ಸಹಸವಾರ ಸುರೇಶ್ ರವರ ತಲೆಗೆ ರಕ್ತಗಾಯಗಳಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಆ ಪೈಕಿ ತೀವ್ರಗಾಯಗೊಂಡ ಸುರೇಶ್ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!