27 C
ಪುತ್ತೂರು, ಬೆಳ್ತಂಗಡಿ
June 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya
error: Content is protected !!