September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!