July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

ಉಜಿರೆ: ಕೊಳ್ತಿಗೆ ಯಕ್ಷಯಾನ 60, ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ ಕಾರ್ಯಕ್ರಮವು ಮೇ 31ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರು ಆಶೀರ್ವಚನ ನೀಡಿದರು.

ಜ್ಯೋತಿ ಪ್ರಜ್ವಲನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ. ಸಂಪತ್ ಸುವರ್ಣ, ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದರು.

ಮಧ್ಯಾಹ್ನ 2-30ರಿಂದ ಯಕ್ಷಗಾನಯಾನ ನಡೆಯಿತು. ಭಾಗವತರಾಗಿ ಕು. ಹೇಮಸ್ವಾತಿ ಕುರಿಯಾಜೆ, ಕು. ಸಿಂಚನಾ ಮೂಡುಕೋಡಿ, ಚೆಂಡೆ-ಮದ್ದಳೆಯಲ್ಲಿ ಶ್ರೇಯಸ್ ಪಾಳಂದ ಅರಸಿನಮಕ್ಕಿ, ಆದಿತ್ಯ ಹೊಳ್ಳ ಉಜಿರೆ ಸಹಕರಿಸಿದರು. ಸಂಜೆ 5-30ರಿಂದ ಭೀಷ್ಮಪರ್ವ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಎಂ. ದಿನೇಶ್ ಅಮ್ಮಣ್ಣಾಯ , ಬಿ. ಸೀತಾರಾಮ ತೊಲ್ಪಡಿತ್ತಾಯ ,ಬಿ. ಜನಾರ್ದನ ತೊಲ್ಪಡಿತ್ತಾಯ, ಅರ್ಥದಾರಿಗಳಾಗಿ ಡಾ. ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್ಟ, ವಿಷ್ಣು ಶರ್ಮಾ ವಾಟೆ ವಾಟೆಪಡ್ಪು ಕೆ. ಸುರೇಶ ಕುದ್ರೆಂತ್ತಾಯ, ಕೊಳ್ತಿಗೆ ನಾರಾಯಣ ಗೌಡ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಉಜಿರೆ ಯಕ್ಷ ಪ್ರೇರಣಾ ಸಮಿತಿಯ ಸಂಚಾಲಕರು, ಸದಸ್ಯರುಗಳು, ಯಕ್ಷಗಾನ ಅಭಿಮಾನಿಗಳು ಉಪಸ್ಥಿತರಿದ್ದರು..

ಕಾರ್ಯಕ್ರಮದಲ್ಲಿ ಉಜಿರೆ ಮಂಜುಶ್ರೀ ಪ್ರಿಂಟರ್ ನ ಮ್ಯಾನೇಜರ್ ಶೇಖರ್ ಟಿ. ಮತ್ತು ಉಜಿರೆ ಶಾಂತರಾಮ ಜ್ಯುವೆಲ್ಲರ್ಸ್ ನ ಆನಂದ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಕೊಳ್ತಿಗೆ ನಾರಾಯಣ ಗೌಡರು ಸ್ವಾಗತಿಸಿದರು. ಯಕ್ಷಗಾನ ಕಲಾವಿದ ಅಶೋಕ್ ಭಟ್ ನಿರೂಪಿಸಿದರು. ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ವಂದಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya
error: Content is protected !!