30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೆಯ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ಸಾಧನೆ ಮಾಡಿದ ಪ್ರಾರ್ಥನಾ ಎಚ್ ಕೆ ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಬಬಿತಾ ರೋಹಿನಾಥ್, ಕಾರ್ಯದರ್ಶಿಯಾದ ಶಿವಾನಿ ರೋಹಿನಾಥ್, ಹಾಗೂ ಟ್ರಸ್ಟಿಗಳಾದ ಜಯಾನಿ ರೋಹಿನಾಥ್ ಮತ್ತು ಯಜ್ಞೇಶ್ ರಾಜ್ ಇವರ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಟ್ರಸ್ಟಿಯಾದ ಯಜ್ಞೇಶ್ ರಾಜ್ ವಿದ್ಯಾರ್ಥಿನಿಯ ಶ್ರಮ, ತಂದೆ ತಾಯಿಯ ಪ್ರೋತ್ಸಾಹ, ಶಾಲೆಯಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಫಲವಾಗಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ಹೇಳುತ್ತ , ವಿದ್ಯಾರ್ಥಿನಿಯ ಸಾಧನೆ ಕುರಿತು ಅಭಿನಂದಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ವಿದ್ಯಾರ್ಥಿನಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಸಂಗೀತ ಎಚ್ ನಿರೂಪಿಸಿ ,ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ-ಬೋಧಕೇತರ ವರ್ಗ ಹಾಗೂ ಪೋಷಕರ ವೃಂದ ಭಾಗವಹಿಸಿದರು.

Related posts

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!