30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೆಯ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ಸಾಧನೆ ಮಾಡಿದ ಪ್ರಾರ್ಥನಾ ಎಚ್ ಕೆ ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಬಬಿತಾ ರೋಹಿನಾಥ್, ಕಾರ್ಯದರ್ಶಿಯಾದ ಶಿವಾನಿ ರೋಹಿನಾಥ್, ಹಾಗೂ ಟ್ರಸ್ಟಿಗಳಾದ ಜಯಾನಿ ರೋಹಿನಾಥ್ ಮತ್ತು ಯಜ್ಞೇಶ್ ರಾಜ್ ಇವರ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಟ್ರಸ್ಟಿಯಾದ ಯಜ್ಞೇಶ್ ರಾಜ್ ವಿದ್ಯಾರ್ಥಿನಿಯ ಶ್ರಮ, ತಂದೆ ತಾಯಿಯ ಪ್ರೋತ್ಸಾಹ, ಶಾಲೆಯಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಫಲವಾಗಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ಹೇಳುತ್ತ , ವಿದ್ಯಾರ್ಥಿನಿಯ ಸಾಧನೆ ಕುರಿತು ಅಭಿನಂದಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ವಿದ್ಯಾರ್ಥಿನಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಸಂಗೀತ ಎಚ್ ನಿರೂಪಿಸಿ ,ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ-ಬೋಧಕೇತರ ವರ್ಗ ಹಾಗೂ ಪೋಷಕರ ವೃಂದ ಭಾಗವಹಿಸಿದರು.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!