July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೆಯ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ಸಾಧನೆ ಮಾಡಿದ ಪ್ರಾರ್ಥನಾ ಎಚ್ ಕೆ ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಬಬಿತಾ ರೋಹಿನಾಥ್, ಕಾರ್ಯದರ್ಶಿಯಾದ ಶಿವಾನಿ ರೋಹಿನಾಥ್, ಹಾಗೂ ಟ್ರಸ್ಟಿಗಳಾದ ಜಯಾನಿ ರೋಹಿನಾಥ್ ಮತ್ತು ಯಜ್ಞೇಶ್ ರಾಜ್ ಇವರ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಟ್ರಸ್ಟಿಯಾದ ಯಜ್ಞೇಶ್ ರಾಜ್ ವಿದ್ಯಾರ್ಥಿನಿಯ ಶ್ರಮ, ತಂದೆ ತಾಯಿಯ ಪ್ರೋತ್ಸಾಹ, ಶಾಲೆಯಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಫಲವಾಗಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ಹೇಳುತ್ತ , ವಿದ್ಯಾರ್ಥಿನಿಯ ಸಾಧನೆ ಕುರಿತು ಅಭಿನಂದಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ವಿದ್ಯಾರ್ಥಿನಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಸಂಗೀತ ಎಚ್ ನಿರೂಪಿಸಿ ,ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ-ಬೋಧಕೇತರ ವರ್ಗ ಹಾಗೂ ಪೋಷಕರ ವೃಂದ ಭಾಗವಹಿಸಿದರು.

Related posts

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!