September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೆಯ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ಸಾಧನೆ ಮಾಡಿದ ಪ್ರಾರ್ಥನಾ ಎಚ್ ಕೆ ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಬಬಿತಾ ರೋಹಿನಾಥ್, ಕಾರ್ಯದರ್ಶಿಯಾದ ಶಿವಾನಿ ರೋಹಿನಾಥ್, ಹಾಗೂ ಟ್ರಸ್ಟಿಗಳಾದ ಜಯಾನಿ ರೋಹಿನಾಥ್ ಮತ್ತು ಯಜ್ಞೇಶ್ ರಾಜ್ ಇವರ ಸಮ್ಮುಖದಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಟ್ರಸ್ಟಿಯಾದ ಯಜ್ಞೇಶ್ ರಾಜ್ ವಿದ್ಯಾರ್ಥಿನಿಯ ಶ್ರಮ, ತಂದೆ ತಾಯಿಯ ಪ್ರೋತ್ಸಾಹ, ಶಾಲೆಯಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಫಲವಾಗಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ಹೇಳುತ್ತ , ವಿದ್ಯಾರ್ಥಿನಿಯ ಸಾಧನೆ ಕುರಿತು ಅಭಿನಂದಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ವಿದ್ಯಾರ್ಥಿನಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕಿ ಸಂಗೀತ ಎಚ್ ನಿರೂಪಿಸಿ ,ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ-ಬೋಧಕೇತರ ವರ್ಗ ಹಾಗೂ ಪೋಷಕರ ವೃಂದ ಭಾಗವಹಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!