July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊAದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-೧೦೦%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್-100%, ಇಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್- 100 %, ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
error: Content is protected !!