July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊAದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-೧೦೦%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್-100%, ಇಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್- 100 %, ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya
error: Content is protected !!