ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರಿಂದ ಅಭಿನಂದನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಸಂಸ್ಥೆಯ ಕೃಷ್ಣಮಠದಲ್ಲಿ ನಡೆಯಿತು.
ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಸ್ಕೌಟ್ ವಿದ್ಯಾರ್ಥಿಗಳಾದ ಆಯುಷ್ ಕೆ, ಯಶಸ್ ಶೆಟ್ಟಿ, ಸಮ್ಯದ್ ಪಿ ಜೈನ್ ಭಾಗವಹಿಸಿ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯ ರವರಿಂದ ಅಭಿನಂದಿಸಲ್ಪಟ್ಟಿರುತ್ತಾರೆ.