22.6 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

ಮುಂಡಾಜೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಊರ ದಾನಿಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ವೈ.ಸಿ.ಭವನದಲ್ಲಿ ಮೇ 31ರಂದು ಜರಗಿತು.


ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಸುಜಿತ್ ಭಿಡೆ ಶೈಕ್ಷಣಿಕ ನಿಧಿ ವಿತರಿಸಿ ಮಾತನಾಡಿ “ದೇಶದ ಪ್ರಗತಿ, ಸಮಾಜವನ್ನು ಮುಂದುವರಿಸಲು ಪ್ರತಿಭೆಗಳು ಅಗತ್ಯ.ಪ್ರತಿ ಉದ್ಯೋಗವು ಉತ್ಕೃಷ್ಟವು ಅಲ್ಲ, ನಿಕೃಷ್ಟವು ಅಲ್ಲ,ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ಪ್ರೀತಿ ಮುಖ್ಯ. ಯಶಸ್ಸಿಗೆ ಹಾದಿ. ಜೀವನದಲ್ಲಿ ಸಂಸ್ಕಾರದ ಜತೆ ಶಿಸ್ತು ಮುಖ್ಯ” ಎಂದರು.


ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಮಾತನಾಡಿ ಶಿಕ್ಷಣ ,ಕ್ರೀಡೆ, ಸಾಂಸ್ಕೃತಿಕ, ಜನಪದ ಕ್ಷೇತ್ರದೊಂದಿಗೆ ನಮ್ಮ ಸಂಸ್ಥೆ ಯುವಜನತೆಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಹಲವಾರು ಎಲೆಮರೆಯ ಕಾಯಿಗಳು ಸಂಸ್ಥೆ ಮೂಲಕ ಬೆಳಕಿಗೆ ಬಂದಿರುವುದು ಹೆಮ್ಮೆಯ ವಿಚಾರ.ವಿದ್ಯಾರ್ಥಿಗಳಿಗೆ ಇಂದು ಸಾಕಷ್ಟುಅವಕಾಶಗಳಿವೆ,ಇವುಗಳನ್ನು ಆಯ್ಕೆ ಮಾಡಿ ಮುಂದುವರಿಯುವುದು ಮುಖ್ಯ” ಎಂದರು.


ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ ಮುಂಬೈ, ಶಮಂತ ಕುಮಾರ್ ಜೈನ್, ಸ್ವಾತಿ ನವೀನ್, ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕಿ ಅಶ್ವಿನಿ ಎ. ಹೆಬ್ಬಾರ್, ಉಪನ್ಯಾಸಕ ಸಚಿನ್ ಹೆಬ್ಬಾರ್,ಶಿಕ್ಷಕಿ ಜತೀಕ್ಷಾ ಮತ್ತಿತರರು ಉಪಸ್ಥಿತರಿದ್ದರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಶಶಿಧರ ಠೋಸರ್ ಸ್ವಾಗತಿಸಿದರು.

Related posts

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya
error: Content is protected !!